ಉಪ್ಪಿನಂಗಡಿ : ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಉಪ್ಪಿನಂಗಡಿ ಸಮೀಪ, ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿ, ಓರ್ವ ಪ್ರಯಾಣಿಕ ಮೃತಪಟ್ಟು 12 ಮಂದಿ ಗಾಯಗೊಂಡಿರುವ ಘಟನೆ ಏಪ್ರಿಲ್ 4 ರಂದು ಬೆಳಿಗ್ಗೆ 5 ಗಂಟೆಗೆ ನಡೆದಿದೆ.
ಮೃತಪಟ್ಟವರನ್ನು ಬೆಂಗಳೂರು ಗ್ರಾಮಾಂತರದ ಯಡಿಯೂರು ನಿವಾಸಿ ಹರ್ಷ (24) ಎಂದು ಗುರುತಿಸಲಾಗಿದೆ.
ಅವರು ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಮಂಗಳೂರು ಹೊರವಲಯದ ಮುಲ್ಕಿಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
Follow us on Social media